ಈ ಕೆಳಗೆ P Q R S ಎಂಬ ನಾಲ್ಕು ವಾಕ್ಯಗಳನ್ನು ಕೊಡಲಾಗಿದೆ. ಈ ವಾಕ್ಯಗಳು ಸ್ಥಾನಪಲ್ಲಟವಾಗಿವೆ. ಅವುಗಳನ್ನು ಅರ್ಥಪೂರ್ಣವಾಗಿ ಜೋಡಿಸುವ ಉತ್ತರವನ್ನು ಗುರುತಿಸಬೇಕು.
P. ಹರಿಹರನು ರಾಜನಾಗಿ ತನ್ನ ಸಹೋದರರ ನೆರವನ್ನು ಪಡೆದನು.
Q. ಇವರು ಸ್ವತಂತ್ರವಾದ ರಾಜ್ಯವನ್ನು ಮಾಡಿ ಕನ್ನಡ ಸಂಸ್ಕೃತಿಯನ್ನು ಬೆಳೆಸಿದರು.
R. ರಾಜ್ಯವನ್ನು ವಿವಿಧ ಭಾಗಗಳಾಗಿ ವಿಂಗಡಿಸಿ ಒಬ್ಬೊಬ್ಬರನ್ನು ಒಂದೊಂದು ಭಾಗಕ್ಕೆ ಅಧಿಕಾರಿಯನ್ನಾಗಿ ನೇಮಿಸಿದರು.
S. ವಿಜಯನಗರ ಸಾಮ್ರಾಜ್ಯ ಸಂಗಮ ಪುತ್ರರಾದ ಹಕ್ಕ-ಬುಕ್ಕರಿಂದ ಸ್ಥಾಪಿತ ವಾಯಿತು.
1
Q R S P
2
P Q R S
3
S R Q P
4
S Q P R